July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya
error: Content is protected !!