July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!