ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ . 12. ಆಗಿರುತ್ತದೆ.

ಅರ್ಹತೆಗಳು: ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳು ಮೀರತಕ್ಕದ್ದಲ್ಲ, ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು, ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ, ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ.

Related posts

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya
error: Content is protected !!