23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿ. ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಉಪನ್ಯಾಸಕರಿಂದ, ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ, “ಆರ್ಟ್ಸ್ & ಸ್ಕಿಲ್ಸ್” – ಕೌಶಲ್ಯದ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಬಿ. ವೋಕ್ ಇನ್ ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ, ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗೆ, “ಸಂತೋಷ ಮತ್ತು ಒತ್ತಡ ಮುಕ್ತ ಜೀವನವನ್ನು ನಡೆಸಲು ಪ್ರಾಯೋಗಿಕ ಮಾರ್ಗಗಳು” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಿ. ವೋಕ್ ಇನ್ ಸಾಫ್ಟ್‌ವೇರ್ & ಆ್ಯಪ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ, ಎಸ್ಡಿಎಂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ “ಐಟಿ ಉದ್ಯಮದಲ್ಲಿನ ಪ್ರಮುಖ ಕೌಶಲ್ಯಗಳು ಮತ್ತು ಪ್ರವೃತ್ತಿಗಳು” ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿವೋಕ್ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು‌.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!