ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿ. ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಉಪನ್ಯಾಸಕರಿಂದ, ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ, “ಆರ್ಟ್ಸ್ & ಸ್ಕಿಲ್ಸ್” – ಕೌಶಲ್ಯದ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಬಿ. ವೋಕ್ ಇನ್ ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ, ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗೆ, “ಸಂತೋಷ ಮತ್ತು ಒತ್ತಡ ಮುಕ್ತ ಜೀವನವನ್ನು ನಡೆಸಲು ಪ್ರಾಯೋಗಿಕ ಮಾರ್ಗಗಳು” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಿ. ವೋಕ್ ಇನ್ ಸಾಫ್ಟ್‌ವೇರ್ & ಆ್ಯಪ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ, ಎಸ್ಡಿಎಂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ “ಐಟಿ ಉದ್ಯಮದಲ್ಲಿನ ಪ್ರಮುಖ ಕೌಶಲ್ಯಗಳು ಮತ್ತು ಪ್ರವೃತ್ತಿಗಳು” ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿವೋಕ್ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು‌.

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya
error: Content is protected !!