25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!