25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!