July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
error: Content is protected !!