July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya
error: Content is protected !!