22.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸಲು ಸಿದ್ಧತೆ ಮಾಡುತ್ತಿರುವುದು ಕಂಡು ಬಂದಿದೆ.


ರಾಜ್ಯದಲ್ಲಿ ಇತ್ತಿಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಡಳಿತಪಕ್ಷ ಕಾಂಗ್ರೆಸ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸನ್ನದ್ಧವಾಗಿದೆ. ಇತ್ತಿಚೇಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾ.ಪಂ, ಜಿ.ಪಂ. ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಂಡಿದೆ. ಹೈಕೋರ್ಟ್ ನಿರ್ದೇಶನದನ್ವಯ ಡಿ.೧೨ರ ಒಳಗಾಗಿ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವ ನಿರೀಕ್ಷೆ ಹೊಂದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಸರ್ಕಾರ ಡಿ.12 ರ ಒಳಗಾಗಿ ಮೀಸಲಾತಿ ಪ್ರಕಟಿಸಿದರೆ ಜನವರಿ ಅಂತ್ಯ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿದೆ ಎಂದು ಹೇಳಿದ್ದಾರೆ.


ತಾ.ಪಂ, ಜಿ.ಪಂಗೆ ಚುನಾವಣೆಯಾಗದೆ ಮೂರು ವರ್ಷ:
ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತಕ್ಕೆ 2021 ಮೇ, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಮೂರು ವರ್ಷ ಕಳೆದರೂ, ಇದುವರೆಗೂ ಚುನಾವಣೆ ನಡೆದಿಲ್ಲ, ತಾ.ಪಂ, ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಸೇರಿದಂತೆ ವಿವಿಧ ಕಾರಣಗಳಿಂದ ೨೦೨೧ ಸಾಲಿನ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಹೈಕೋರ್ಟ್ ಮಟ್ಟಿಲೇರುತ್ತಿರುವ ಕಾರಣ ಚುನಾವಣೆ ವಿಳಂಬವಾಗಿವೆ. ಹೈಕೋರ್ಟ್ ಇತ್ತೀಚೆಗೆ ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 31 ಜಿಲ್ಲೆಗಳ 239 ತಾಲೂಕುಗಳಲ್ಲಿ ಒಟ್ಟು 1130 ಜಿಲ್ಲಾ ಪಂಚಾಯಿತಿ ಸದಸ್ಯ ಕ್ಷೇತ್ರ ಹಾಗೂ 3671 ತಾಲೂಕು ಪಂಚಾಯಿತಿ ಸದಸ್ಯ ಕ್ಷೇತ್ರಗಳನ್ನು ವಿಂಗಡಿಸಲಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ7 ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ 22 ತಾಲೂಕು ಪಂಚಾಯತ್ ಕ್ಷೇತ್ರಗಳನ್ನಾಗಿ ಪುನರ್‌ವಿಂಗಡಣೆ ಮಾಡಲಾಗಿದೆ.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya
error: Content is protected !!