September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸಲು ಸಿದ್ಧತೆ ಮಾಡುತ್ತಿರುವುದು ಕಂಡು ಬಂದಿದೆ.


ರಾಜ್ಯದಲ್ಲಿ ಇತ್ತಿಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಡಳಿತಪಕ್ಷ ಕಾಂಗ್ರೆಸ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸನ್ನದ್ಧವಾಗಿದೆ. ಇತ್ತಿಚೇಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾ.ಪಂ, ಜಿ.ಪಂ. ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಂಡಿದೆ. ಹೈಕೋರ್ಟ್ ನಿರ್ದೇಶನದನ್ವಯ ಡಿ.೧೨ರ ಒಳಗಾಗಿ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವ ನಿರೀಕ್ಷೆ ಹೊಂದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಸರ್ಕಾರ ಡಿ.12 ರ ಒಳಗಾಗಿ ಮೀಸಲಾತಿ ಪ್ರಕಟಿಸಿದರೆ ಜನವರಿ ಅಂತ್ಯ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿದೆ ಎಂದು ಹೇಳಿದ್ದಾರೆ.


ತಾ.ಪಂ, ಜಿ.ಪಂಗೆ ಚುನಾವಣೆಯಾಗದೆ ಮೂರು ವರ್ಷ:
ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತಕ್ಕೆ 2021 ಮೇ, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಮೂರು ವರ್ಷ ಕಳೆದರೂ, ಇದುವರೆಗೂ ಚುನಾವಣೆ ನಡೆದಿಲ್ಲ, ತಾ.ಪಂ, ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಸೇರಿದಂತೆ ವಿವಿಧ ಕಾರಣಗಳಿಂದ ೨೦೨೧ ಸಾಲಿನ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಹೈಕೋರ್ಟ್ ಮಟ್ಟಿಲೇರುತ್ತಿರುವ ಕಾರಣ ಚುನಾವಣೆ ವಿಳಂಬವಾಗಿವೆ. ಹೈಕೋರ್ಟ್ ಇತ್ತೀಚೆಗೆ ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 31 ಜಿಲ್ಲೆಗಳ 239 ತಾಲೂಕುಗಳಲ್ಲಿ ಒಟ್ಟು 1130 ಜಿಲ್ಲಾ ಪಂಚಾಯಿತಿ ಸದಸ್ಯ ಕ್ಷೇತ್ರ ಹಾಗೂ 3671 ತಾಲೂಕು ಪಂಚಾಯಿತಿ ಸದಸ್ಯ ಕ್ಷೇತ್ರಗಳನ್ನು ವಿಂಗಡಿಸಲಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ7 ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ 22 ತಾಲೂಕು ಪಂಚಾಯತ್ ಕ್ಷೇತ್ರಗಳನ್ನಾಗಿ ಪುನರ್‌ವಿಂಗಡಣೆ ಮಾಡಲಾಗಿದೆ.

Related posts

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!