25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸಲು ಸಿದ್ಧತೆ ಮಾಡುತ್ತಿರುವುದು ಕಂಡು ಬಂದಿದೆ.


ರಾಜ್ಯದಲ್ಲಿ ಇತ್ತಿಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಡಳಿತಪಕ್ಷ ಕಾಂಗ್ರೆಸ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸನ್ನದ್ಧವಾಗಿದೆ. ಇತ್ತಿಚೇಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾ.ಪಂ, ಜಿ.ಪಂ. ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಂಡಿದೆ. ಹೈಕೋರ್ಟ್ ನಿರ್ದೇಶನದನ್ವಯ ಡಿ.೧೨ರ ಒಳಗಾಗಿ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವ ನಿರೀಕ್ಷೆ ಹೊಂದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಸರ್ಕಾರ ಡಿ.12 ರ ಒಳಗಾಗಿ ಮೀಸಲಾತಿ ಪ್ರಕಟಿಸಿದರೆ ಜನವರಿ ಅಂತ್ಯ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿದೆ ಎಂದು ಹೇಳಿದ್ದಾರೆ.


ತಾ.ಪಂ, ಜಿ.ಪಂಗೆ ಚುನಾವಣೆಯಾಗದೆ ಮೂರು ವರ್ಷ:
ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತಕ್ಕೆ 2021 ಮೇ, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಮೂರು ವರ್ಷ ಕಳೆದರೂ, ಇದುವರೆಗೂ ಚುನಾವಣೆ ನಡೆದಿಲ್ಲ, ತಾ.ಪಂ, ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಸೇರಿದಂತೆ ವಿವಿಧ ಕಾರಣಗಳಿಂದ ೨೦೨೧ ಸಾಲಿನ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಹೈಕೋರ್ಟ್ ಮಟ್ಟಿಲೇರುತ್ತಿರುವ ಕಾರಣ ಚುನಾವಣೆ ವಿಳಂಬವಾಗಿವೆ. ಹೈಕೋರ್ಟ್ ಇತ್ತೀಚೆಗೆ ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 31 ಜಿಲ್ಲೆಗಳ 239 ತಾಲೂಕುಗಳಲ್ಲಿ ಒಟ್ಟು 1130 ಜಿಲ್ಲಾ ಪಂಚಾಯಿತಿ ಸದಸ್ಯ ಕ್ಷೇತ್ರ ಹಾಗೂ 3671 ತಾಲೂಕು ಪಂಚಾಯಿತಿ ಸದಸ್ಯ ಕ್ಷೇತ್ರಗಳನ್ನು ವಿಂಗಡಿಸಲಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ7 ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ 22 ತಾಲೂಕು ಪಂಚಾಯತ್ ಕ್ಷೇತ್ರಗಳನ್ನಾಗಿ ಪುನರ್‌ವಿಂಗಡಣೆ ಮಾಡಲಾಗಿದೆ.

Related posts

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!