22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸಲು ಸಿದ್ಧತೆ ಮಾಡುತ್ತಿರುವುದು ಕಂಡು ಬಂದಿದೆ.


ರಾಜ್ಯದಲ್ಲಿ ಇತ್ತಿಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಡಳಿತಪಕ್ಷ ಕಾಂಗ್ರೆಸ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸನ್ನದ್ಧವಾಗಿದೆ. ಇತ್ತಿಚೇಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾ.ಪಂ, ಜಿ.ಪಂ. ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಂಡಿದೆ. ಹೈಕೋರ್ಟ್ ನಿರ್ದೇಶನದನ್ವಯ ಡಿ.೧೨ರ ಒಳಗಾಗಿ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವ ನಿರೀಕ್ಷೆ ಹೊಂದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಸರ್ಕಾರ ಡಿ.12 ರ ಒಳಗಾಗಿ ಮೀಸಲಾತಿ ಪ್ರಕಟಿಸಿದರೆ ಜನವರಿ ಅಂತ್ಯ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿದೆ ಎಂದು ಹೇಳಿದ್ದಾರೆ.


ತಾ.ಪಂ, ಜಿ.ಪಂಗೆ ಚುನಾವಣೆಯಾಗದೆ ಮೂರು ವರ್ಷ:
ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತಕ್ಕೆ 2021 ಮೇ, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಮೂರು ವರ್ಷ ಕಳೆದರೂ, ಇದುವರೆಗೂ ಚುನಾವಣೆ ನಡೆದಿಲ್ಲ, ತಾ.ಪಂ, ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಸೇರಿದಂತೆ ವಿವಿಧ ಕಾರಣಗಳಿಂದ ೨೦೨೧ ಸಾಲಿನ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಹೈಕೋರ್ಟ್ ಮಟ್ಟಿಲೇರುತ್ತಿರುವ ಕಾರಣ ಚುನಾವಣೆ ವಿಳಂಬವಾಗಿವೆ. ಹೈಕೋರ್ಟ್ ಇತ್ತೀಚೆಗೆ ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 31 ಜಿಲ್ಲೆಗಳ 239 ತಾಲೂಕುಗಳಲ್ಲಿ ಒಟ್ಟು 1130 ಜಿಲ್ಲಾ ಪಂಚಾಯಿತಿ ಸದಸ್ಯ ಕ್ಷೇತ್ರ ಹಾಗೂ 3671 ತಾಲೂಕು ಪಂಚಾಯಿತಿ ಸದಸ್ಯ ಕ್ಷೇತ್ರಗಳನ್ನು ವಿಂಗಡಿಸಲಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ7 ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ 22 ತಾಲೂಕು ಪಂಚಾಯತ್ ಕ್ಷೇತ್ರಗಳನ್ನಾಗಿ ಪುನರ್‌ವಿಂಗಡಣೆ ಮಾಡಲಾಗಿದೆ.

Related posts

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!