April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚಕ ಮಂಜುನಾಥ್ ಭಟ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಬೈಲಬರಿ, ಪ್ರ. ಕಾರ್ಯದರ್ಶಿ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಬೋಂಟ್ರೊಟ್ಟುಗುತ್ತು ವ್ಯವಸ್ಥಾಪಕ ಗಣೇಶ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಟ್ರಸ್ಟ್ ಸದಸ್ಯರಾದ ರಮಾನಾಥ ಶೆಟ್ಟಿ ಪಂಬಾಜೆ, ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸದಾನಂದ ಪೂಜಾರಿ, ಆನಂದ ದೇವಾಡಿಗ, ಬಳಂಜ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಎಚ್. ದೇಜಪ್ಪ ಪೂಜಾರಿ, ಸಂದೇಶ್ ಪೂಜಾರಿ ಪೆರಾಜೆ, ಪ್ರವೀಣ್ ಗಾಂದೋಟ್ಟು, ಸದಾಶಿವ ಶೆಟ್ಟಿ ಬಳಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
error: Content is protected !!