ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ . 12. ಆಗಿರುತ್ತದೆ.

ಅರ್ಹತೆಗಳು: ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳು ಮೀರತಕ್ಕದ್ದಲ್ಲ, ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು, ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ, ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!