23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿ. ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಉಪನ್ಯಾಸಕರಿಂದ, ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ, “ಆರ್ಟ್ಸ್ & ಸ್ಕಿಲ್ಸ್” – ಕೌಶಲ್ಯದ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಬಿ. ವೋಕ್ ಇನ್ ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ, ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗೆ, “ಸಂತೋಷ ಮತ್ತು ಒತ್ತಡ ಮುಕ್ತ ಜೀವನವನ್ನು ನಡೆಸಲು ಪ್ರಾಯೋಗಿಕ ಮಾರ್ಗಗಳು” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಿ. ವೋಕ್ ಇನ್ ಸಾಫ್ಟ್‌ವೇರ್ & ಆ್ಯಪ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ, ಎಸ್ಡಿಎಂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ “ಐಟಿ ಉದ್ಯಮದಲ್ಲಿನ ಪ್ರಮುಖ ಕೌಶಲ್ಯಗಳು ಮತ್ತು ಪ್ರವೃತ್ತಿಗಳು” ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿವೋಕ್ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು‌.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya
error: Content is protected !!