July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿ. ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಉಪನ್ಯಾಸಕರಿಂದ, ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ, “ಆರ್ಟ್ಸ್ & ಸ್ಕಿಲ್ಸ್” – ಕೌಶಲ್ಯದ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಬಿ. ವೋಕ್ ಇನ್ ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ, ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗೆ, “ಸಂತೋಷ ಮತ್ತು ಒತ್ತಡ ಮುಕ್ತ ಜೀವನವನ್ನು ನಡೆಸಲು ಪ್ರಾಯೋಗಿಕ ಮಾರ್ಗಗಳು” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಿ. ವೋಕ್ ಇನ್ ಸಾಫ್ಟ್‌ವೇರ್ & ಆ್ಯಪ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ, ಎಸ್ಡಿಎಂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ “ಐಟಿ ಉದ್ಯಮದಲ್ಲಿನ ಪ್ರಮುಖ ಕೌಶಲ್ಯಗಳು ಮತ್ತು ಪ್ರವೃತ್ತಿಗಳು” ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿವೋಕ್ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು‌.

Related posts

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
error: Content is protected !!