30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya
error: Content is protected !!