23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!