July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!