April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya
error: Content is protected !!