25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
error: Content is protected !!