July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!