25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ, ತಂಗಿ, ತಾಯಿ ಮನೆಗೆ ಬೀಗ ಹಾಕಿ ತೆರಳಿದ್ದು. ಬಳಿಕ ತಂಗಿ, ತಾಯಿ ವಶಕ್ಕೆ ಪಡೆದುಕೊಂಡು ಮನೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ .

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಕಾಲೋನಿಯಲ್ಲಿರುವ ನೌಷದ್ ಮನೆಗೆ ಡಿ.5 ರಂದು ಬೆಳಗ್ಗೆ 5:30 ಗಂಟೆಗೆ ಚೆನೈನಿಂದ ಬಂದ ಎನ್.ಐ.ಎ ಡಿವೈಎಸ್ಪಿ ವಿಘ್ನೇಶ್ ಮತ್ತು ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ದಾಳಿ ವೇಳೆ ಮನೆಗೆ ಬೀಗ ಹಾಕಿ ನೌಷದ್‌ ತಂಗಿ ತಫಾ ಮತ್ತು ತಾಯಿ ತುಲೈಕಾ ತೆರಳಿದ್ದರು.

ಸತತ ಐದು ಗಂಟೆಗಳ ಬಳಿಕ ಎನ್.ಐ.ಎ ಅಧಿಕಾರಿಗಳು ತಂಗಿ ಮತ್ತು ತಾಯಿಯನ್ನು 12 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಮನೆಯೊಂದರಲ್ಲಿರುವ ಬಗ್ಗೆ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಇನೋವಾ ಕಾರಿನಲ್ಲಿ ನೌಷದ್ ಪೊಯ್ಯಗುಡ್ಡೆ ಮನೆಗೆ ಕರೆತಂದು ಬೀಗ ತೆರೆಸಿ ಮನೆಯೊಳಗೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸಿದ್ದಾರೆ.
ಎನ್.ಐ.ಎ ದಾಳಿ ಮುಕ್ತಾಯವಾಗಿದ್ದು ,ಮಹಜರು ಮಾಡಿ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ಮತ್ತು ಇತರ ಇಬ್ಬರು ಸಿಬ್ಬಂದಿಗಳು ಸ್ಥಳದಿಂದ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಾಲಣಿವೇಲು, ಆನಂದ್ ಗೌಡ, ಸುಕನ್ಯ ಸಹಕರಿಸಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!