25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ . 12. ಆಗಿರುತ್ತದೆ.

ಅರ್ಹತೆಗಳು: ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳು ಮೀರತಕ್ಕದ್ದಲ್ಲ, ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು, ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ, ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya
error: Content is protected !!