23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ. ವೋಕ್ ವಿಭಾಗದ ವತಿಯಿಂದ, ಎಸ್‌ಡಿಎಂಇ ಸೊಸೈಟಿಯ ಮಾಜಿ ಕಾರ್ಯದರ್ಶಿ, ಕೀರ್ತಿಶೇಷ ಯಶೋವರ್ಮ ಅವರ ಜನ್ಮದಿನದ ಪ್ರಯುಕ್ತ, ಅವರ ನೆನಪಿನಲ್ಲಿ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬಿ. ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಉಪನ್ಯಾಸಕರಿಂದ, ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳನ್ನುದ್ದೇಶಿಸಿ, “ಆರ್ಟ್ಸ್ & ಸ್ಕಿಲ್ಸ್” – ಕೌಶಲ್ಯದ ಕುರಿತಾದ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಬಿ. ವೋಕ್ ಇನ್ ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ, ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಿಗೆ, “ಸಂತೋಷ ಮತ್ತು ಒತ್ತಡ ಮುಕ್ತ ಜೀವನವನ್ನು ನಡೆಸಲು ಪ್ರಾಯೋಗಿಕ ಮಾರ್ಗಗಳು” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬಿ. ವೋಕ್ ಇನ್ ಸಾಫ್ಟ್‌ವೇರ್ & ಆ್ಯಪ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ, ಎಸ್ಡಿಎಂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ “ಐಟಿ ಉದ್ಯಮದಲ್ಲಿನ ಪ್ರಮುಖ ಕೌಶಲ್ಯಗಳು ಮತ್ತು ಪ್ರವೃತ್ತಿಗಳು” ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿವೋಕ್ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು‌.

Related posts

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya
error: Content is protected !!