July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

ಧರ್ಮಸ್ಥಳ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆಯವರು ಡಿ.4 ರಂದು ರಾಜ್ಯಾದ್ಯಂತ ಶುದ್ಧಗಂಗಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರೊಂದಿಗೆ ಮಾತನಾಡುತ್ತಾ ತಿಳಿಸಿರುತ್ತಾರೆ.



ಮಾನವ ಆಹಾರ ಇಲ್ಲದೇ 10 ದಿನವಾದರೂ ಬದುಕಬಹುದು. ನೀರಿಲ್ಲದೇ ಬದುಕಲು ಸಾಧ್ಯವಿಲ್ಲ. ನೀರು ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತಿದೆ. ಅಶುದ್ಧ ನೀರನ್ನು ಕುಡಿಯುವುದರಿಂದ ಮುಖ್ಯವಾಗಿ ಮಹಿಳೆಯರ ಮತ್ತು ಮಕ್ಕಳು ಹಾಗೂ ಜನ ಸಾಮಾನ್ಯರ ಮೇಲೆ ಆಗುತ್ತಿರುವ ಅನಾರೋಗ್ಯ ಸಮಸ್ಯೆಯನ್ನು ಮನಗಂಡು ಎಲ್ಲಿ ನೋವಿದೆಯೋ ಅಲ್ಲಿ ಔಷಧಿ ನೀಡಬೇಕೆಂದು ಶುದ್ಧ ನೀರಿನ ಸಮಸ್ಯೆ ಇರುವಲ್ಲಿ ಯೋಜನೆ ಮೂಲಕ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಗಿದೆ. ಈ ಶುದ್ಧಗಂಗಾ ಘಟಕಗಳ ಶುದ್ಧ ನೀರನ್ನು ಬಳಸುವುದರಿಂದ ಅದೆಷ್ಟೋ ಜನರ ಆರೋಗ್ಯ ರಕ್ಷಣೆಯಾಗಿದೆ. ಮನೆಯಲ್ಲಿ ನೀರಿನ ವ್ಯವಸ್ಥೆಯ ಜವಾಬ್ದಾರಿ ಹೆಚ್ಚಾಗಿ ಮಹಿಳೆಯರಿಗೆ ಇದೆ. ಇಂದು ಶುದ್ಧ ನೀರು ಬಳಕೆಯಿಂದ ಮಹಿಳೆ ತನ್ನ ಹಾಗೂ ತನ್ನ ಕುಟುಂಬದ ಆರೋಗ್ಯ ರಕ್ಷಿಸಿಕೊಳ್ಳುತ್ತಿದ್ದಾರೆ. ಶುದ್ಧ ನೀರಿನ ಬಳಕೆಯಿಂದ ಆಗಿರುವ ಬದಲಾವಣೆಯ ಬಗ್ಗೆ ಇನ್ನಷ್ಟು ಜನರಿಗೆ ಮಾಹಿತಿ ನೀಡಿ ಅವರಲ್ಲಿ ಇಚ್ಛ್ಟಾ ಶಕ್ತಿ ಮೂಡಿಸಿ ನಿರಂತರ ಶುದ್ಧನೀರಿನ ಬಳಕೆ ಮಾಡುವಂತೆ ಎಲ್ಲಾ ಮೇಲ್ವಿಚಾರಕರು ಪ್ರಯತ್ನಿಸಿ ಜನಮನ ತಲುಪಿದರೆ ಅದು ಪುಣ್ಯದ ಕೆಲಸ. ಪ್ರತೀ ವರ್ಷಕ್ಕೊಮ್ಮೆ ಗ್ರಾಹಕರ ಸಭೆ ನಡೆಸಿ ಅವರಿಗೆ ಶುದ್ಧ ನೀರಿನ ಬಳಕೆಯಿಂದಾದ ಪ್ರಯೋಜನವನ್ನು ತಿಳಿಸಬೇಕು. ಘಟಕಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿ ನಿರಂತರ ಜನರಿಗೆ ಸೇವೆಯನ್ನು ನೀಡಬೇಕು. ಎಂದು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ .ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಸಮುದಾಯ ಅಭಿವೃದ್ಧಿಯ ಆಶಯವನ್ನಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನೇಕ ಜನಪರ ಕಾರ್ಯಕ್ರಮವನ್ನು ಅನುಷ್ಠಾನ ಮಾಡಿದ್ದು, ಅವುಗಳಲ್ಲಿ ಶುದ್ಧಗಂಗಾ ಕಾರ್ಯಕ್ರಮವೂ ಒಂದು. ಜನ ಸಾಮಾನ್ಯರು ಶುದ್ಧನೀರನ್ನು ಬಳಸಿ ಖಾಯಿಲೆಯಿಂದ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸುವ ಉದ್ದೇಶದಿಂದ ಆರಂಭಗೊಂಡ ಶುದ್ಧಗಂಗಾ ಕಾರ್ಯಕ್ರಮದಲ್ಲಿ ಶುದ್ಧ ನೀರಿನ ಸಮಸ್ಯೆ ಇರುವ ರಾಜ್ಯದ ವಿವಿಧ ಗ್ರಾಮಗಳಲ್ಲಿ 2009ರಿಂದ ಇದುವರೆಗೆ ಒಟ್ಟು 476 ಶುದ್ಧಗಂಗಾ ಘಟಕಗಳನ್ನು ಸ್ಥಳೀಯಾಡಳಿತದ ಸಹಭಾಗಿತ್ವದಲ್ಲಿ ಆರಂಭಿಸಿ ಪ್ರತೀನಿತ್ಯ 5.91 ಲಕ್ಷ ಜನರಿಗೆ ಶುದ್ಧ ನೀರನ್ನು ಒದಗಿಸುತ್ತಿದೆ.

ಈ ಸಂದರ್ಭದಲ್ಲಿ ಯೋಜನೆಯ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್‌ಕುಮಾರ್ ಎಸ್.ಎಸ್, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ವಿಭಾಗದ ನಿರ್ದೇಶಕರಾದ ಶಿವಾನಂದ ಆಚಾರ್ಯ, ಯೋಜನಾಧಿಕಾರಿಗಳಾದ ಯುವರಾಜ್ ಜೈನ್, ಫಕ್ಕೀರಪ್ಪ ಬೆಲ್ಲಾಮುದ್ದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya
error: Content is protected !!