25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

ಬೆಳ್ತಂಗಡಿ: ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ ಸಮುದಾಯದ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.


ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೆಕುಡಿಯ ಸಮುದಾಯದ ಮುಖಂಡರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದ ಅವರು ಮಲೆಕುಡಿಯ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಹಾಗೂ ಮಲೆಕುಡಿಯ ಸಂಘದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿದರು.


ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಎಳನೀರು ಮಾತನಾಡಿ ಮಲೆಕುಡಿಯ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 10-15 ವರ್ಷದಿಂದ ಬೇಡಿಕೆಯನ್ನು ಸಲ್ಲಿಸುತ್ತಾ ಬಂದಿದ್ದು ಇದುವರೆಗೂ ಫಲಪ್ರದವಾಗಿಲ್ಲ. ವಿದ್ಯುತ್ ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು. ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಸರಿಯಾದ ಮಾಹಿತಿ ಇಲಾಖೆಗಳಿಂದ ದೊರೆಯುತ್ತಿಲ್ಲ ಹಾಗಾಗಿ ಸಾಕಷ್ಟು ಜನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದರು. ಸುಲ್ಕೇರಿಯ ನಾಯಿದಗುರಿಯ ಸಮಸ್ಯೆಯನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಲಾಯಿತು.


ವಿದ್ಯುತ್ ಸಂಪರ್ಕ ಪಡೆಯುವ ಬಗ್ಗೆ ವೆಂಕಪ್ಪ ಬೊಟ್ಟಿತ್ತಿಲ್ ಇಲಾಖಾಧಿಕಾರಿಗಳಿಗೆ ದಾಖಲೆ ತೋರಿಸಿದರು. ಬೆಳ್ತಂಗಡಿ ತಾ. ಸಮಿತಿ ಕಾರ್ಯದರ್ಶಿ ಜಯಾನಂದ ಪಿಲಿಕಲ ಜಾತಿ ಪ್ರಮಾಣ ಪತ್ರವನ್ನು ಮಲೆಕುಡಿಯ ಎಂಬುದಾಗಿ ನೀಡಬೇಕು ಎಂದು ಆಗ್ರಹಿಸಿದರು ಹಾಗೂ 94 ಸಿ ಸಮಸ್ಯೆಯನ್ನು ಗಮನಕ್ಕೆ ತಂದರು.


ಪುತ್ತೂರು ತಾ. ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಲಬೆರಕೆ ಹಾಗೂ ಕಳಪೆ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಮನೆ ಇಲ್ಲದಿರುವುದು, ರೇಷನ್ ಕಾರ್ಡ್ ಇಲ್ಲದಿರುವುದು, ಅಕ್ರಮ ಸಕ್ರಮ, ಹೀಗೆ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು.
ರಾಜ್ಯ ಮಲೆಕುಡಿಯ ಸಂಘದ ಉಪಾಧ್ಯಕ್ಷೆ ವಸಂತಿ ನೆಲ್ಲಿಕಾರು, ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ, ಜೊತೆ ಕಾರ್ಯದರ್ಶಿ ಲಕ್ಷಣ ನೆರಿಯ, ಸದಸ್ಯೆ ವಿನೋದಾ ಪುತ್ತೂರು, ತನಿಯಪ್ಪ ಬೆಟ್ಟಂಪಾಡಿ, ಉಮೇಶ್ ನಾರಾವಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Related posts

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya
error: Content is protected !!