25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

ತುಲು ಕಥೆ ಬರಹಗಾರರಿಗೆ ಮಾಯಿಲು ಫಿಲ್ಮ್ಸ್ ಮತ್ತು ಕಡಲ್ ಸ್ಟುಡಿಯೋಸ್ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು ನಿಮ್ಮ ಸ್ವಂತ ಕಥೆಗೆ “ಕುದ್ಕ ಬಚ್ಚಿರೆ” ಎಂಬ ವೇದಿಕೆಯನ್ನು ಸಿದ್ದಪಡಿಸಿ ತುಲು ಸಣ್ಣ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ಮೂರು ಉತ್ತಮ ಕಥೆಗಳಿಗೆ 3,000ರೂ.ಗಳಂತೆ ಮತ್ತು 7 ಮೆಚ್ಚಿದ ಕಥೆಗಳಿಗೆ 1,500ರೂ. ಗಳಂತೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಆಯ್ದ ಕತೆಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಜ.31ರ ಒಳಗಾಗಿ 800 ಪದಗಳ ಮಿತಿಯಲ್ಲಿ ತುಲು ಭಾಷೆಯಲ್ಲಿ ಸ್ವಂತ ಕಥೆ ಬರೆದು [email protected]ಗೆ ಇ-ಮೇಲ್ ಅಥವಾ 9900634405 ನಂಬರಿಗೆ ಪಿಡಿಎಫ್ ಅಥವಾ ವರ್ಡ್ ಫಾರ್ಮ್ಯಾಟ್ ನಲ್ಲಿ ವಾಟ್ಸಾಪ್ ಮೂಲಕ ಕಳುಹಿಸಬಹುದು

ಕೈ ಬರಹದ ಮೂಲಕ ಕತೆ ಬರೆಯುವವರು 2 A4 ಹಾಳೆ ಪುಟದಲ್ಲಿ ಕತೆ ಬರೆದು “ಆರ್ ಪ್ರದೀಪ್, ತಿರ್ತಗುತ್ತು ಗರ್ಡಾಡಿ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, 574217” ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬಹುದು.

ಕಥೆ ಬರೆದವರ ಹೆಸರು, ವಿಳಾಸ, ವಯಸ್ಸು ಮತ್ತು ಕಥೆಯ ತಲೆಬರಹವನ್ನು ಪೋಸ್ಟ್ ಮೂಲಕ ಕಳಿಸುವವರು ಬೇರೆ ಒಂದು ಹಾಳೆಯಲ್ಲಿ ಹಾಗೂ ವಾಟ್ಸಾಪ್, ಮೇಲ್ ಮಾಡುವವರು ಬೇರೆ ಪುಟದಲ್ಲಿ ಕಳಿಸಬೇಕು.

ನಿಮ್ಮದೇ ಸ್ವಂತ ವಿಷಯದ ಆಧಾರದ ಮೇಲೆ ಕತೆ ಬರೆಯಬಹುದು. ಆದರೆ 14 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಆಯೋಜಕರ ಸೋಷಿಯಲ್ ಮೀಡಿಯಾವನ್ನು ಫಾಲೋ ಮಾಡಬಹುದು ಅಥವಾ 9900634405, 8762686433 ಈ ನಂಬರಿಗೆ ಕರೆಮಾಡಬಹುದು.

Related posts

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
error: Content is protected !!