July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

ತುಲು ಕಥೆ ಬರಹಗಾರರಿಗೆ ಮಾಯಿಲು ಫಿಲ್ಮ್ಸ್ ಮತ್ತು ಕಡಲ್ ಸ್ಟುಡಿಯೋಸ್ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು ನಿಮ್ಮ ಸ್ವಂತ ಕಥೆಗೆ “ಕುದ್ಕ ಬಚ್ಚಿರೆ” ಎಂಬ ವೇದಿಕೆಯನ್ನು ಸಿದ್ದಪಡಿಸಿ ತುಲು ಸಣ್ಣ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ಮೂರು ಉತ್ತಮ ಕಥೆಗಳಿಗೆ 3,000ರೂ.ಗಳಂತೆ ಮತ್ತು 7 ಮೆಚ್ಚಿದ ಕಥೆಗಳಿಗೆ 1,500ರೂ. ಗಳಂತೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಆಯ್ದ ಕತೆಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಜ.31ರ ಒಳಗಾಗಿ 800 ಪದಗಳ ಮಿತಿಯಲ್ಲಿ ತುಲು ಭಾಷೆಯಲ್ಲಿ ಸ್ವಂತ ಕಥೆ ಬರೆದು [email protected]ಗೆ ಇ-ಮೇಲ್ ಅಥವಾ 9900634405 ನಂಬರಿಗೆ ಪಿಡಿಎಫ್ ಅಥವಾ ವರ್ಡ್ ಫಾರ್ಮ್ಯಾಟ್ ನಲ್ಲಿ ವಾಟ್ಸಾಪ್ ಮೂಲಕ ಕಳುಹಿಸಬಹುದು

ಕೈ ಬರಹದ ಮೂಲಕ ಕತೆ ಬರೆಯುವವರು 2 A4 ಹಾಳೆ ಪುಟದಲ್ಲಿ ಕತೆ ಬರೆದು “ಆರ್ ಪ್ರದೀಪ್, ತಿರ್ತಗುತ್ತು ಗರ್ಡಾಡಿ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, 574217” ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬಹುದು.

ಕಥೆ ಬರೆದವರ ಹೆಸರು, ವಿಳಾಸ, ವಯಸ್ಸು ಮತ್ತು ಕಥೆಯ ತಲೆಬರಹವನ್ನು ಪೋಸ್ಟ್ ಮೂಲಕ ಕಳಿಸುವವರು ಬೇರೆ ಒಂದು ಹಾಳೆಯಲ್ಲಿ ಹಾಗೂ ವಾಟ್ಸಾಪ್, ಮೇಲ್ ಮಾಡುವವರು ಬೇರೆ ಪುಟದಲ್ಲಿ ಕಳಿಸಬೇಕು.

ನಿಮ್ಮದೇ ಸ್ವಂತ ವಿಷಯದ ಆಧಾರದ ಮೇಲೆ ಕತೆ ಬರೆಯಬಹುದು. ಆದರೆ 14 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಆಯೋಜಕರ ಸೋಷಿಯಲ್ ಮೀಡಿಯಾವನ್ನು ಫಾಲೋ ಮಾಡಬಹುದು ಅಥವಾ 9900634405, 8762686433 ಈ ನಂಬರಿಗೆ ಕರೆಮಾಡಬಹುದು.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya
error: Content is protected !!