September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

ತುಲು ಕಥೆ ಬರಹಗಾರರಿಗೆ ಮಾಯಿಲು ಫಿಲ್ಮ್ಸ್ ಮತ್ತು ಕಡಲ್ ಸ್ಟುಡಿಯೋಸ್ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು ನಿಮ್ಮ ಸ್ವಂತ ಕಥೆಗೆ “ಕುದ್ಕ ಬಚ್ಚಿರೆ” ಎಂಬ ವೇದಿಕೆಯನ್ನು ಸಿದ್ದಪಡಿಸಿ ತುಲು ಸಣ್ಣ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ಮೂರು ಉತ್ತಮ ಕಥೆಗಳಿಗೆ 3,000ರೂ.ಗಳಂತೆ ಮತ್ತು 7 ಮೆಚ್ಚಿದ ಕಥೆಗಳಿಗೆ 1,500ರೂ. ಗಳಂತೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಆಯ್ದ ಕತೆಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಜ.31ರ ಒಳಗಾಗಿ 800 ಪದಗಳ ಮಿತಿಯಲ್ಲಿ ತುಲು ಭಾಷೆಯಲ್ಲಿ ಸ್ವಂತ ಕಥೆ ಬರೆದು [email protected]ಗೆ ಇ-ಮೇಲ್ ಅಥವಾ 9900634405 ನಂಬರಿಗೆ ಪಿಡಿಎಫ್ ಅಥವಾ ವರ್ಡ್ ಫಾರ್ಮ್ಯಾಟ್ ನಲ್ಲಿ ವಾಟ್ಸಾಪ್ ಮೂಲಕ ಕಳುಹಿಸಬಹುದು

ಕೈ ಬರಹದ ಮೂಲಕ ಕತೆ ಬರೆಯುವವರು 2 A4 ಹಾಳೆ ಪುಟದಲ್ಲಿ ಕತೆ ಬರೆದು “ಆರ್ ಪ್ರದೀಪ್, ತಿರ್ತಗುತ್ತು ಗರ್ಡಾಡಿ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, 574217” ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬಹುದು.

ಕಥೆ ಬರೆದವರ ಹೆಸರು, ವಿಳಾಸ, ವಯಸ್ಸು ಮತ್ತು ಕಥೆಯ ತಲೆಬರಹವನ್ನು ಪೋಸ್ಟ್ ಮೂಲಕ ಕಳಿಸುವವರು ಬೇರೆ ಒಂದು ಹಾಳೆಯಲ್ಲಿ ಹಾಗೂ ವಾಟ್ಸಾಪ್, ಮೇಲ್ ಮಾಡುವವರು ಬೇರೆ ಪುಟದಲ್ಲಿ ಕಳಿಸಬೇಕು.

ನಿಮ್ಮದೇ ಸ್ವಂತ ವಿಷಯದ ಆಧಾರದ ಮೇಲೆ ಕತೆ ಬರೆಯಬಹುದು. ಆದರೆ 14 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಆಯೋಜಕರ ಸೋಷಿಯಲ್ ಮೀಡಿಯಾವನ್ನು ಫಾಲೋ ಮಾಡಬಹುದು ಅಥವಾ 9900634405, 8762686433 ಈ ನಂಬರಿಗೆ ಕರೆಮಾಡಬಹುದು.

Related posts

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya
error: Content is protected !!