September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವದಂದು ಡಿ.6ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯೊಂದಿಗೆ ಕೊಪ್ಪರಿಗೆ ಮುಹೂರ್ತಗೊಂಡು ಭಕ್ತಾದಿಗಳಿಂದ ಅಂಗಪ್ರದಕ್ಷಣೆ ನಡೆಯಿತು.

ಶ್ರೀ ದೇವರಿಗೆ ನೂತನವಾಗಿ ನಿರ್ಮಿಸಿದ ಸ್ವರ್ಣಮಯ ಅಟ್ಟೆ ಪ್ರಭಾವಳಿಯ ಮೆರವಣಿಗೆಯು ಭಜನೆ, ಬ್ಯಾಂಡ್, ವಾಲಗದೊಂದಿಗೆ ಭವ್ಯ ಮೆರವಣಿಗೆ ಮಹಾದ್ವಾರದಿಂದ ದೇವಾಲಯದ ವರೆಗೆ ಸಾಗಿ ಶ್ರೀ ದೇವರಿಗೆ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಿಸಲಾಯಿತು.

ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ವೇಳೆ ದೇವಾಲಯದ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ರಾತ್ರಿ ರಂಗ ಪೂಜೆ, ಪಂಚಮಿ ಉತ್ಸವ, ಅನ್ನ ಸಂತರ್ಪಣೆ ನಡೆಯಲಿದೆ.

Related posts

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya
error: Content is protected !!