ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರವು ರೂ. 95.58 ಲಕ್ಷ ಅನುದಾನ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಯುವ ಮುಖಂಡರಾದ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಯೆಂದು ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿಗಳು ಹಾಗೂ ಧರ್ಮಸ್ಥಳದ ಕೆ ಜಯಕೀರ್ತಿ ಜೈನ್ ರವರು ತಿಳಿಸಿದ್ದಾರೆ.









