23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya
error: Content is protected !!