23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!