25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಡಿ.6 ರಂದು ಸದ್ರಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಜಿಲ್ಲಾ ಅಧಿಕಾರಿ ಹಾಗೂ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಗಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸರ್ವೆ ನಂ.123/1ರ ಸರಕಾರಿ ಜಾಗದಲ್ಲಿ ರೇಣುಕಾ ಕೋಂ ವಿಶ್ವನಾಥ ಎಂಬವರು ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಡಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ನ.13ರಂದು ತೆರವು ಮಾಡಲಾಗಿತ್ತು. ಅದೇ ಸ್ಥಳದಲ್ಲಿ ಪುನ: ಕಟ್ಟಡವನ್ನು ನಿರ್ಮಿಸುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿ.6ರಂದು ಗ್ರಾಮ ಆಡಳಿತಾಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ರೇಣುಕಾರವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಹಲ್ಲೆ ಮಾಡಿ ಮನೆ ನಿರ್ಮಾಣವನ್ನು ಮುಂದುವರೆಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಗಾಯಗೊಂಡ ಗ್ರಾಮ ಆಡಳಿತಾಧಿಕಾರಿ ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಕಾರಿ ಕರ್ತವ್ಯದಲ್ಲಿದ್ದ ನೌಕರನ ಮೇಲೆ ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕಡಬ ತಹಶೀಲ್ದಾರ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ, ಪುತ್ತೂರು ಉಪ ಸಹಾಯಕ ಆಯುಕ್ತರಿಗೆ ಹಾಗೂ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!