September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya
error: Content is protected !!