July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಡಿ.6 ರಂದು ಸದ್ರಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಜಿಲ್ಲಾ ಅಧಿಕಾರಿ ಹಾಗೂ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಗಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸರ್ವೆ ನಂ.123/1ರ ಸರಕಾರಿ ಜಾಗದಲ್ಲಿ ರೇಣುಕಾ ಕೋಂ ವಿಶ್ವನಾಥ ಎಂಬವರು ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಡಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ನ.13ರಂದು ತೆರವು ಮಾಡಲಾಗಿತ್ತು. ಅದೇ ಸ್ಥಳದಲ್ಲಿ ಪುನ: ಕಟ್ಟಡವನ್ನು ನಿರ್ಮಿಸುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿ.6ರಂದು ಗ್ರಾಮ ಆಡಳಿತಾಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ರೇಣುಕಾರವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಹಲ್ಲೆ ಮಾಡಿ ಮನೆ ನಿರ್ಮಾಣವನ್ನು ಮುಂದುವರೆಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಗಾಯಗೊಂಡ ಗ್ರಾಮ ಆಡಳಿತಾಧಿಕಾರಿ ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಕಾರಿ ಕರ್ತವ್ಯದಲ್ಲಿದ್ದ ನೌಕರನ ಮೇಲೆ ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕಡಬ ತಹಶೀಲ್ದಾರ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ, ಪುತ್ತೂರು ಉಪ ಸಹಾಯಕ ಆಯುಕ್ತರಿಗೆ ಹಾಗೂ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya
error: Content is protected !!