September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧನ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ,ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಬೆಳ್ತಂಗಡಿ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಡಿ.7ರಂದು ಮನವಿ ಸಲ್ಲಿಸಲಾಯಿತು.

ಡಿ.6 ರಂದು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಗ್ರಾಮದ ಸ.ನಂ 123/1 ರ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದ ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯಾದ ಸಿದ್ದಲಿಂಗ ಜಂಗಮಶೆಟ್ಟಿ ರವರ ಮೇಲೆ ಜಮೀನು ಅತಿಕ್ರಮಣದಾರರಾದ ರೇಣುಕಾ ಕೋಂ ವಿಶ್ವನಾಥ ಎಂಬುವವರ ತಂದೆ ಮುತ್ತು ಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ಮಾಡಿರುತ್ತಾರೆ.
ಈ ಘಟನೆಯನ್ನು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯಿಂದ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮನೋಸ್ಥೆರ್ಯ ಕುಂದಿದ್ದು, ಕ್ಷೇತ್ರಮಟ್ಟದಲ್ಲಿ ಭಯದಿಂದಲೇ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಾದ ಮುತ್ತು ಸ್ವಾಮಿ ಮತ್ತು ಇತರರನ್ನು ಕೂಡಲೇ ಬಂಧಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಡಿ.8 ರೊಳಗೆ ಆರೋಪಿತರ ಬಂಧನವಾಗದೇ ಇದ್ದಲ್ಲಿ ಡಿ.9ರಿಂದ ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಲೇಖನಿ ಸ್ಥಗಿತ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!