July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya
error: Content is protected !!