March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!