April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪ್ರೇಮ ಹೊಸಮನೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳಾದ ವಿನುತಾ ಡಿ ಮಜಲು, ಉಷಾ ಡಿ ಮಜಲು, ಪ್ರಮೀಳಾ ಕಕ್ಕಿಂಜೆ, ಲೀಲಾವತಿ ಬರಮೇಲು, ಸುಶೀಲ ಕಲ್ಲಗುಡ್ಡೆ, ಮೋಹಿನಿ ಗುವೆದಕಂಡ, ಕು.ತೇಜಸ್ವಿನಿ ತೋಟತ್ತಾಡಿ, ಕು. ಮೋಕ್ಷಿತ ತೋಟತ್ತಾಡಿ, ಸುಜಾತಾ ಪೊಯ್ಯೇದಡ್ಡ, ಪುಷ್ಪ ಹಾರಗಂಡಿ, ಚಿನ್ನಮ್ಮ ಡಿ.ಮಜಲು, ಸರೋಜಿನಿ ಡಿ.ಮಜಲು, ಸುಮತಿ ಬರಮೇಲು, ಪ್ರೇಮ ಬರಮೇಲು, ವಿಶಾಲಾಕ್ಷಿ ಅರಮನೆ, ಕು. ಕೃತಿಕಾ ಡಿ.ಮಜಲು, ಕು.ಸಂಹಿತಾ ಡಿ.ಮಜಲು,ಕು. ಸಾನ್ವಿ ಅರಮನೆ, ಕು. ಸಾನಿಧ್ಯ ಅರಮನೆ, ಅದ್ವಿತ್ ಪೊಯ್ಯೇದಡ್ಡ, ಮತ್ತಿತರರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಹಿಳಾ ಬಿಲ್ಲವ ವೇದಿಕೆ ಎಲ್ಲ ಪದಾಧಿಕಾರಿಗಳಿಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಧನ್ಯವಾದ ಸಲ್ಲಿಸಿದರು. ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಮೂರ್ಜೆ ಎಲ್ಲ ಸದಸ್ಯರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಿದರು.

Related posts

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
error: Content is protected !!