March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!