23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
error: Content is protected !!