September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!