July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

ಉಜಿರೆ: ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಕೌಶಲ್ಯಯುತ ಹೆಜ್ಜೆಗಳನ್ನು ಮೆಲುಕು ಹಾಕುವ ಉದ್ದೇಶದೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ‌.ಕುಮಾರ ಹೆಗ್ಡೆ ತಿಳಿಸಿದರು.

ಅವರು ಡಿ.9 ರಂದು ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜನಸಾಮಾನ್ಯರಲ್ಲಿ ಮನೋವಿಜ್ಞಾನದ ಕುರಿತು ತಿಳುವಳಿಕೆ ಮೂಡಿಸುವ ಸಮುದಾಯಕೇಂದ್ರಿತ ಕಾರ್ಯಕ್ರಮಗಳು, ಮನೋವಿಜ್ಞಾನದ ಮೈಲಿಗಲ್ಲುಗಳನ್ನು ಸಂಕೇತಿಸುವ ಮಹತ್ವದ ದಿನಾಚರಣೆಯ ಮಹತ್ವ ಸಾರುವ ವಾಕಥಾನ್, ಹೊಸ ಪೀಳಿಗೆಯನ್ನು ಮನೋವಿಜ್ಞಾನದ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿಸಲು ಪ್ರೇರಣೆ ನೀಡುವ ವೃತ್ತಿಪರ ಮಾರ್ಗದರ್ಶಿ ಕಾರ್ಯಾಗಾರಗಳು, ಮನೋವಿಜ್ಞಾನವನ್ನು ಮಕ್ಕಳ ಕಲಿಕೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗಿಸಿ ಅನ್ವಯಿಸುವ ಶಾಲಾದತ್ತು ಯೋಜನೆಯಡಿ ವಿವಿಧ ತರಬೇತಿ, ಮನೋವಿಜ್ಞಾನ ವಿಭಾಗದ ಬೆಳವಣಿಗೆಗೆ ವೃತ್ತಿಪರ ಕೊಡುಗೆಗಳನ್ನು ನೀಡಿದ ಬೋಧಕರನ್ನು ಗೌರವಿಸುವ ‘ಗುರುವಂದನಾ’, ವಿವಿಧೆಡೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುವ ಚಾರಿಟಿ ಕಾರ್ಯಕ್ರಮ, ಮನೋವಿಜ್ಞಾನದ ಸಮಗ್ರ ಸ್ವರೂಪವನ್ನು ಪರಿಚಯಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮನೋವಿಜ್ಞಾನದ ಆಧಾರದಲ್ಲಿ ಕೌಶಲ್ಯಗಳನ್ನು ರೂಢಿಸಿಕೊಳ್ಳುವುದಕ್ಕೆ ನೆರವಾಗುವ ಮಾರ್ಗದರ್ಶಿ ಕಾರ್ಯಾಗಾರ, ಮನೋವಿಜ್ಞಾನದ ಸಿದ್ಧಾಂತಗಳನ್ನು ಆಧರಿಸಿ ಸಾಹಿತ್ಯ ರಚನೆಯ ಕೌಶಲ್ಯ ಬೆಳೆಸುವ ಪ್ರಯೋಗಳನ್ನು ಕೇಂದ್ರೀಕರಿಸಿಕೊಂಡ 25 ಬಗೆಯ ಕಾರ್ಯಕ್ರಮಗಳನ್ನು ವಿಭಾಗವು ಏರ್ಪಡಿಸಲಿದೆ ಎಂದರು.

ಡಿಸೆಂಬರ್ 13 ಮತ್ತು 14ರಂದು ‘ಬ್ರೇಕಿಂಗ್ ಬ್ಯಾರಿಯರ್ಸ್: ಅಡ್ವಾನ್ಸಿಂಗ್ ಸೈಕಲಾಜಿಕಲ್ ವೆಲ್‌ಬೀಯಿಂಗ್ ಅಕ್ರಾಸ್ ಬಾರ್ಡರ್ಸ್’ ಶೀರ್ಷಿಕೆಯಡಿ ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಿದೆ. ಅಮೆರಿಕಾದ ವಿಸ್ಕಾನ್ಸಿನ್ ಮ್ಯಾಡಿಸನ್ ವಿಶ್ವವಿದ್ಯಾಲಯದ ಮನೋಶಾಸ್ತ್ರಜ್ಞೆ ಡಾ.ಕ್ಯಾರೋಲ್.ಡಿ.ರಿಫ್, ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಮೇಶ್ ಸಾಲಿಯಾನ್ .ಕೊಲ್ಕೋತ್ತಾದ ಪ್ರಾಧ್ಯಾಪಕರಾದ ಡಾ.ಸುಮಿತ್ ದತ್ತಾ ಅವರು ಭಾಗವಹಿಸಲಿದ್ದಾರೆ ಎಂದರು.

ಈ ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಡಿ.13 ರಂದು ಬೆಳಿಗ್ಗೆ 10ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಮೇಶ್ ಸಾಲಿಯಾನ್,ವಿಶ್ರಾಂತ ಪ್ರಾಧ್ಯಾಪಕಿ ಡಾ.ಎಂ.ವೈ.ಮಂಜುಳಾ, ಕ್ಷೇಮವನದ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ಮತ್ತು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ,ಉಜಿರೆ ಎಸ್.ಡಿ.ಎಂ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಚಾಲಕಕಿ ಡಾ.ವಂದನಾ ಜೈನ್,ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗ್ಡೆ,ಅಶ್ವಿನಿ ಎಸ್ ಶೆಟ್ಟಿ, ಡಾ.ಮಗೇಶ್ ಬಾಬು ಎನ್,ಆಶ್ವಿನಿ ಹೆಚ್.ಸಿಂಧು ವಿ,ರಮ್ಯ ಕೆ,ಸುಧೀರ್ ಕೆವಿ,ಪದ್ಮಶ್ರೀ ಕೆ, ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya
error: Content is protected !!