23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

ಬೆಳ್ತಂಗಡಿ: ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಚಿಕಿತ್ಸೆ ಒದಗಿಸಿದವರು ಸಾರ್ವಜನಿಕವಾಗಿ ಪ್ರಸಂಸೆಗೆ ಒಳಗಾಗಿದ್ದಾರೆ

    ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯ ಸಿಬ್ಬಂದಿ ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ಅವರು ಸಕಾಲದಲ್ಲಿ ಚಿಕಿತ್ಸೆ ಒದಗಿಸಿದ್ದು ಹೃದಯಘಾತಕ್ಕೊಳಗಾದ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಮಿಥುನ್ ಅವರು ಸಾವಿನಿಂದ ಪಾರಾಗಿದ್ದಾರೆ.

    ಘಟನೆ ವಿವರ : ಮಿಥುನ್ ಅವರು ಲಘು ಹೃಯಘಾತಕ್ಕೊಳಗಾಗಿದ್ದು, ಅವರ ಇಸಿಜಿ ರಿಪೋರ್ಟ್ ನ್ನು ಅವರ ಸಂಬಂಧಿಕರು ಪ್ರದೀಪ್ ನಾಯಕ್ ಕಳುಹಿಸಿದ್ದರು. ಈ ವರದಿಯನ್ನು ಪ್ರದೀಪ್ ನಾಯಕ್ ಅವರು ಖ್ಯಾತ ಹೃದಯತಜ್ಞ ಡಾ| ಪದ್ಮನಾಭ ಕಾಮತ್ ಅವರಿಗೆ ಕಳುಹಿಸಿದ್ದರು. ವರದಿಯನ್ನು ನೋಡಿ ಕಾಮತ್ ಅವರು ತಕ್ಷಣವೇ ರೋಗಿಯನ್ನು ಮಂಗಳೂರು ಆಸ್ಪತ್ರೆಗೆ ಕರೆತರಲು ಸೂಚಿಸಿದ್ದರು.ಅದರಂತೆ ಉಪ್ಪಿನಂಗಡಿ ಬಳಿಯ ತಣ್ಣೀರುಪಂತ ಅಳಕೆಯಿಂದ ಮಿಥುನ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಮಂಗಳೂರಿಗೆ ಬರುತ್ತಿದ್ದರು. ಇದೇ ವೇಳೆ ಪ್ರದೀಪ್ ನಾಯಕ್ ಅವರು ತನ್ನ ಮನೆಯಿಂದ ಬಸ್ಸಿನಲ್ಲಿ ಹೊರಟಿದ್ದರು. ಮಿಥುನ್ ಅವರು ಪುಂಜಾಲಕಟ್ಟೆ ಕಳೆದು ಸಾಗುತ್ತಿರುವಾಗ ಅವರಿಗೆ ಎದೆನೋವು ತೀವ್ರವಾಯಿತು. ಈ ವಿಚಾರ ತಿಳಿದ ಪ್ರದೀಪ್ ನಾಯಕ್ ಅವರು ವಗ್ಗ ಬಳಿ ಬಸ್ಸಿನಿಂದ ಇಳಿದು,ಮಿಥುನ್ ಅವರಿಗಾಗಿ ಕಾದಿದ್ದರು.ಅವರ ಬಳಿ ಹೃದಯಾಘಾತವಾದ ಕೂಡಲೇ ಅಗತ್ಯವಾಗಿ ನೀಡಬೇಕಾದ ಔಷಧಿಯನ್ನು ಇರಿಸಿಕೊಂಡಿದ್ದು, ರೋಗಿಗೆ ನೀಡಿದರು. ಇದರಿಂದ ಮಿಥುನ್ ಅವರಿಗೆ ಮತ್ತೆ ಹೃದಯಾಘಾತವಾಗುವುದು ತಪ್ಪಿತು. ಬಳಿಕ ಅವರು ಅದೇ ಕಾರಿನಲ್ಲಿ ಮಂಗಳೂರಿಗೆ ಸಾಗುತ್ತಿರುವಾಗ ಟ್ರಾಫಿಕ್ ಜಾಮ್ ಇರುವ ಕಾರಣ ಕೆ.ಎಂ.ಸಿ.ಯ ಅಂಬ್ಯುಲೆನ್ಸ್ ವಾಹನಕ್ಕೆ ಕರೆ ಮಾಡಿ ಬರಿಸಿ, ರೋಗಿಯನ್ನು ಶೀಘ್ರವಾಗಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದರು.

    ‌ ಇದೀಗ ಮಿಥುನ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ವೈದ್ಯ ಡಾ| ಪದ್ಮನಾಭ ಕಾಮತ್ ತಿಳಿಸಿದ್ದು, ಪ್ರದೀಪ್ ನಾಯಕ್ ಅವರ ಸಕಾಲಿಕ ಕಾರ್ಯವೈಖರಿಗೆ ಶ್ಲಾಘನೆಯನ್ನು ಅವರು ತಿಳಿಸಿದ್ದಾರೆ.

    Related posts

    ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

    Suddi Udaya

    ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

    Suddi Udaya

    ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

    Suddi Udaya

    ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

    Suddi Udaya

    ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

    Suddi Udaya

    ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

    Suddi Udaya
    error: Content is protected !!