April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

ಉಜಿರೆ: “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಶ್ರೀಮತಿ ಅಂಕಿತ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ 3 ರಿಂದ 6 ವರ್ಷದ ವಿದ್ಯಾರ್ಥಿಗಳ ‘ಬನ್ನಿ’ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಗಳಾಗಿ ಬೆಳ್ತಂಗಡಿಯ ಸ್ಥಳೀಯ ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತನುಡಿಗಳನ್ನಾಡಿ ಅಭಿನಯ ಗೀತೆ ಕಲಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ರವೀನ ಹಾಗೂ ಮಮತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸುವಿನ ವಂದಿಸಿದರು.

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!