23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

ಉಜಿರೆ ಗ್ರಾಮ ಬಡೆಕೊಟ್ಟು ನಿವಾಸಿ ವೃದ್ಧೆ ಸುಶೀಲಾ ಇವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸುರಿದ ಭೀಕರ ಮಳೆಗೆ ಬೀಳುವ ಹಂತದಲ್ಲಿದ್ದು,ಇದನ್ನು ಮನಗಂಡು ಉಜಿರೆ ಬೆಳಾಲು ಹಾಗೂ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದವರು  ತಾತ್ಕಾಲಿಕವಾಗಿ ಟರ್ಪಾಲ್ ಹೊದೆಸಿ ಸರಿಪಡಿಸಿದ್ದರು.

ಇದೀಗ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆಯ ಕಾರ್ಯಕ್ರಮದಲ್ಲಿ ಇವರಿಗೆ ಹೊಸ ಮನೆಯು ನಿರ್ಮಾಣಗೊಳ್ಳಲಿದ್ದು ಇದರ ಅಂಗವಾಗಿ ಮನೆಯ ಪಾಯಕ್ಕಾಗಿ ಮಣ್ಣು ತೆಗೆಯುವ ಕೆಲಸವನ್ನು ಶ್ರಮದಾನದ ಮೂಲಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಸೇವೆ ಸಲ್ಲಿಸಿ ವೃದ್ದೆ ಸುಶೀಲಾರವರಿಗೆ ಧೈರ್ಯ ತುಂಬಿದರು.

Related posts

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya
error: Content is protected !!