23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!